ಬೆಂಗಳೂರು ಮಾರ್ಚ್ 06, 2017:  ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ-ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ಸಭೆ ಅಖಿಲ ಭಾರತೀಯ ಪ್ರತಿನಿಧಿ ಸಭಾ  ಇದೇ 2017ರ ಮಾರ್ಚ್ 19, 20, 21ರಂದು ತಮಿಳುನಾಡಿನ ಕೊಯಮತ್ತೂರಿನ ಶ್ರೀ ಅಮೃತ ವಿಶ್ವ ವಿದ್ಯಾಶ್ರಮದ ವಿಶಾಲ ಪರಿಸರದಲ್ಲಿ ನಡೆಯಲಿದೆ.

ದೇಶಾದ್ಯಂತ ಹರಡಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳ ಮೂಲಕ ಆಯ್ಕೆಯಾದ ಪ್ರತಿನಿಧಿಗಳು, ಸಂಘದ ರಾಜ್ಯಮಟ್ಟದ ಹೊಣೆಗಾರಿಕೆಯ ಪದಾಧಿಕಾರಿಗಳು ಜೊತೆಗೆ ಸಂಘ ಪರಿವಾರದ 40ಕ್ಕೂ ಮಿಕ್ಕ ಸಂಘಟನೆಗಳ ರಾಷ್ಟ್ರೀಯ ಸ್ತರದ ಕಾರ್ಯಕರ್ತರು ಈ 3ದಿನದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಶ್ರೀ ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹರಾದ ಶ್ರೀ ಸುರೇಶ್ ಜೋಷಿಯವರ ಹಿರಿತನದಲ್ಲಿ ಸಭೆ ಜರುಗಲಿದೆ. ಮಾರ್ಚ್ 19ರಂದು ಬೆಳಗ್ಗೆ 8.30ಕ್ಕೆ ಸರಸಂಘಚಾಲಕ ಮೋಹನ್ ಭಾಗವತ್ ಅಖಿಲ ಭಾರತೀಯ ಪ್ರತಿನಿಧಿ ಸಭಾವನ್ನು ಉದ್ಘಾಟಿಸಲಿದ್ದಾರೆ.

ರೈತಾಪಿ ಜನರ ನಡುವೆ ಕೆಲಸ ಮಾಡುತ್ತಿರುವ ಭಾರತೀಯ ಕಿಸಾನ್ ಸಂಘ, ಗುಡ್ಡಗಾಡಿನ ಜನರ ನಡುವೆ ಸೇವಾಕಾರ್ಯದ ಹಂದರ ನಿರ್ಮಿಸಿರುವ ವನವಾಸಿ ಕಲ್ಯಾಣಾಶ್ರಮ, ಕಾಲೇಜು ವಿದ್ಯಾರ್ಥಿಗಳ ನಡುವೆ ಕ್ರಿಯಾಶೀಲರಾಗಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕಾರ್ಮಿಕ ರಂಗದಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಮಜ್ದೂರ್ ಸಂಘ, ಸಾಧು, ಸಂತ, ಮಠಾಧೀಶರ ನಡುವಿನ ಧಾರ್ಮಿಕ ಸಂಘಟನೆ ವಿಶ್ವ ಹಿಂದೂ ಪರಿಷದ್, ರಾಜಕೀಯ ರಂಗದಲ್ಲಿ ಸಕ್ರಿಯವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಸಮಾಜ ಜೀವನದ ಅನ್ಯಾನ್ಯ ರಂಗಗಳಲ್ಲಿ ಕಾರ್ಯಶೀಲವಾಗಿರುವ ವಿದ್ಯಾಭಾರತಿ, ವಿಜ್ಞಾನಭಾರತಿ, ಕ್ರೀಡಾಭಾರತಿ, ಸೇವಾಭಾರತಿ, ಸಂಸ್ಕೃತಭಾರತಿ, ಸಂಸ್ಕಾರಭಾರತಿ, ಲಘುಉದ್ಯೋಗ ಭಾರತಿ ಅಲ್ಲದೆ ಸ್ತ್ರೀ ಶಕ್ತಿ ಜಾಗರಣದಲ್ಲಿ ತೊಡಗಿರುವ ರಾಷ್ಟ್ರಸೇವಿಕಾ ಸಮಿತಿ ಮಹಿಳಾ ಸಮನ್ವಯ, ಜನ ಜಾಗೃತಿಯ ರಂಗದಲ್ಲಿ ಸಕ್ರಿಯವಾಗಿರುವ ಸ್ವದೇಶಿ ಜಾಗರಣ ಮಂಚ್, ದೀನದಯಾಳ್ ಸಂಶೋಧನಾ ಸಂಸ್ಥೆ, ಭಾರತ ವಿಕಾಸ ಪರಿಷತ್, ಶೈಕ್ಷಣಿಕ ಮಹಾಸಂಘ, ಧರ್ಮಜಾಗರಣ – ಮುಂತಾದ ಸಂಘಟನೆಯ ಪ್ರಮುಖರು ಭಾಗವಹಿಸಲಿದ್ದಾರೆ.

ದೃಷ್ಟಿಹೀನರ ನಡುವೆ ಕ್ರಿಯಾಶೀಲರಾಗಿರುವ ಸಕ್ಷಮ, ಭಾರತದ ಗಡಿ ಪ್ರದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿರುವ ಸೀಮಾ ಸುರಕ್ಷಾ ಪರಿಷತ್, ನಿವೃತ್ತ ಸೈನಿಕರ ಸಮಾಜಮುಖಿ ವೇದಿಕೆ ಪೂರ್ವಸೈನಿಕ ಪರಿಷತ್‌ನಂತಹ ವಿಶಿಷ್ಟ ಸಂಘಟನೆಗಳ ಪ್ರಮುಖರು ಪ್ರತಿನಿಧಿಸಭಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಎಲ್ಲ ಸಂಘಟನೆಗಳ ವಾರ್ಷಿಕ ಕಾರ್ಯಕಲಾಪದ ವರದಿ, ವಿಶ್ಲೇಷಣೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಜ್ಯವಾರು ಕಾರ್ಯಚಟುವಟಿಕೆಗಳ ಅವಲೋಕನ ನಡೆಯಲಿದೆ. ಜೊತೆಗೆ ದೇಶದ ಆಗುಹೋಗುಗಳನ್ನು ಪ್ರಭಾವಿಸುವ ಪ್ರಮುಖ ವಿಷಯಗಳ ಕುರಿತು ಸಭೆ ಎಲ್ಲ ಮಗ್ಗಲುಗಳಲ್ಲಿ ಚರ್ಚಿಸಿ ಸಭೆ ನಿರ್ಣಯ ಅಂಗೀಕರಿಸಲಿದೆ.

ಸಮಾಜ ಜೀವನದ ಎಲ್ಲ ರಂಗಗಳಲ್ಲಿ ಕಾರ್ಯನಿರತರಾಗಿರುವ 1200ಕ್ಕೂ ಹೆಚ್ಚು ಪ್ರತಿನಿಧಿಗಳು ದೇಶದ ಮೂಲೆ-ಮೂಲೆಗಳಿಂದ ಈ ಸಭೆಗೆ ಆಗಮಿಸುತ್ತಿದ್ದಾರೆ.

RSS Akhil Bharatiya Sah Prachar Pramuk J Nandakumar. Dakshin Tamilnadu Pranth Sanghachalak Marimuttu, Pranth Prachar Pramukh Muttuswamy at the Press Meet
RSS Dakshin Tamilnadu Pranth Sanghachalak Marimuttu addressing the Press Meet

Leave a Reply

Your email address will not be published.

This site uses Akismet to reduce spam. Learn how your comment data is processed.