ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಬೌದ್ಧಿಕ್ ಪ್ರಮುಖರಾದ ಶ್ರೀ ದಿನೇಶ್ ಪೈಅವರು ನಿಧನರಾಗಿದ್ದಾರೆ.ಈ ಹಿಂದೆ ಪ್ರಾಂತದ ಬೌದ್ಧಿಕ ಪ್ರಮುಖರಾಗಿಯೂ ಕಾರ್ಯನಿರ್ವಹಿಸಿದ್ದರು. ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕ್ಷೇತ್ರೀಯ ಸಂಘಚಾಲಕ ವಿ ನಾಗರಾಜ್, ಪ್ರಾಂತ ಸಂಘಚಾಲಕ ಡಾ. ವಾಮನ್ ಶೆಣೈ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರೀಯ ಕಾರ್ಯವಾಹರಾದ ನಾ ತಿಪ್ಪೇಸ್ವಾಮಿಯವರು ಸಂತಾಪ ಸೂಚಿಸುತ್ತಾ “ಆತ್ಮೀಯ ದಿನೇಶ್ ಪೈ ಅವರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಮನಸ್ಸಿಗೆ ಆಘಾತ ಉಂಟು ಮಾಡಿದೆ. ಅನೇಕ ವರ್ಷಗಳಿಂದ ಸಂಘದ ವಿವಿಧ ಜವಾಬ್ದಾರಿಗಳನ್ನು ಹೊತ್ತು ಸಮರ್ಪಕವಾಗಿ ಕಾರ್ಯವನ್ನು ನಿರ್ವಹಿಸಿದರು. ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಆನ್ಲೈನ್ ಮುಖಾಂತರ ಬೌದ್ಧಿಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದರು. ಅವರು ಹೊಸ ಹೊಸ ಯೋಜನೆಗಳನ್ನು ರೂಪಿಸಿ ಕಾರ್ಯದಲ್ಲಿ ನಾವೀನ್ಯತೆ ತರುತ್ತಿದ್ದರು.”

“ಇಂತಹ ಒಬ್ಬ ಕಾರ್ಯಕರ್ತನನ್ನು ಆಕಸ್ಮಿಕವಾಗಿ ಕಳೆದುಕೊಂಡಿರುವುದು ಅತ್ಯಂತ ದುಃಖವನ್ನುಂಟು ಮಾಡಿದೆ ಭಗವಂತ ಅವರ ಕುಟುಂಬ ವರ್ಗದವರಿಗೆ ಕಾರ್ಯಕರ್ತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುವೆ.” ಎಂದಿದ್ದಾರೆ.

Leave a Reply

Your email address will not be published.

This site uses Akismet to reduce spam. Learn how your comment data is processed.