ಹುಬ್ಬಳ್ಳಿ: ಲೋಕಹಿತ ಟ್ರಸ್ಟ್ ಹಾಗೂ ವಿಶ್ವ ಸಂವಾದ ಕೇಂದ್ರ ಹುಬ್ಬಳ್ಳಿ ಸಂಯುಕ್ತಾಶ್ರಯದಲ್ಲಿ ಆದ್ಯ ಪತ್ರಕರ್ತ ಮಹರ್ಷಿ ನಾರದ ಜಯಂತಿ ಹಾಗೂ ಸನ್ಮಾನ ಕಾರ್ಯಕ್ರಮ ಹುಬ್ಬಳ್ಳಿ ಮಹಾನಗರದ ಜೆಸಿ ನಗರದ ಚೇಂಬರ್ ಆಪ್ ಕಾಮರ್ಸ್ ನ ಶ್ರೀ ಚಂದ್ರವದನ ದೇಸಾಯಿ ಸಭಾಂಗಣದಲ್ಲಿ ನಡೆಯಿತು.

ಧಾರವಾಡ ವಿಭಾಗ ಸಂಘಚಾಲಕ ಗೋವಿಂದಪ್ಪ ಗೌಡಪ್ಪಗೋಳ ಇವರ ಉಪಸ್ಥಿತಿಯಲ್ಲಿ ಮಹರ್ಷಿ ನಾರದ ಜಯಂತಿ ಹಾಗೂ ಮಾಧ್ಯಮ ಲೋಕದಲ್ಲಿ ಸಾಧನೆ ಮಾಡಿದ ಹಿರಿಯ ಪತ್ರಕರ್ತರಿಗೆ ಹಾಗೂ ಛಾಯಾಗ್ರಾಹಕರಿಗೆ ಆಧರಿಸಿ ಸನ್ಮಾನಿಸಲಾಯಿತು.

ಕನ್ನಡಪ್ರಭ ಹುಬ್ಬಳ್ಳಿಯ ಸ್ಥಾನೀಯ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣನವರ ಅವರಿಗೆ, ಹುಬ್ಬಳ್ಳಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಗಣಪತಸಾ ಜರತಾರಘರ ಅವರನ್ನು ಸನ್ಮಾನಿಸಲಾಯಿತು.

ವಿಭಾಗ ಸಂಘಚಾಲಕ ಗೋವಿಂದಪ್ಪ ಗೌಡಪ್ಪಗೋಳ ದಿಕ್ಸೂಚಿ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಶ್ರೀನಿವಾಸ ಬಳ್ಳಿ ಭಾಗವಹಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡು ಪ್ರಾಂತಗಳ ಪ್ರಚಾರ ಪ್ರಮುಖ್ ಅರುಣಕುಮಾರ, ಕರ್ನಾಟಕ ಉತ್ತರ ಪ್ರಾಂತದ ಸಹಕಾರ್ಯವಾಹ ಕಿರಣ ಗುಡ್ಡದಕೇರಿ, ಧಾರವಾಡ ವಿಭಾಗ ಕಾಯ೯ವಾಹ ಡಾ. ಮಧುಸೂದನ್, ವಿಭಾಗ ಪ್ರಚಾರಕ ವಿಶ್ವನಾಥ, ಕಾರ್ಯಕರ್ತ ಅಮೃತ ಜೋಶಿ ಇನ್ನಿತರ ಕಾರ್ಯಕರ್ತರು, ಮಹಿಳೆಯರು, ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.

Leave a Reply

Your email address will not be published.

This site uses Akismet to reduce spam. Learn how your comment data is processed.