ನವದೆಹಲಿ: ನೀತಿ ಆಯೋಗವು ಸಾವಯವ ಹಾಗೂ ಜೈವಿಕ ರಸಗೊಬ್ಬರದ ಉತ್ಪಾದನೆ ಹಾಗೂ ಉತ್ತೇಜನದ ಜೊತೆಗೆ ಆರ್ಥಿಕ ಕಾರ್ಯಸಾಧ್ಯತೆಯ ಹೆಚ್ಚಳಕ್ಕೆ ಗೋಶಾಲೆಗಳ ಮೇಲೆ ಹೆಚ್ಚಿನ ಗಮನ’ ಎಂಬ ವರದಿಯನ್ನು ಬಿಡುಗಡೆ ಮಾಡಿದ್ದು “ಗೋಮೂತ್ರ ಹಾಗೂ ಸಗಣಿಯಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ” ಎಂದು ತಿಳಿಸಿದೆ. ಈ ಮೂಲಕ ಸಾವಯವ ಕೃಷಿಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದಿದೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಸದಸ್ಯರನ್ನು ಒಳಗೊಂಡ 17 ಸದಸ್ಯರ ನೀತಿ ಆಯೋಗದ ಕಾರ್ಯಪಡೆಯು (NITI Aayog Task Force) ತನ್ನ ವರದಿಯಲ್ಲಿ ಭಾರತದ ಮಣ್ಣು ಸಾವಯವ ಅಂಶಗಳ ಕೊರತೆಯನ್ನು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ನಮ್ಮ ನೆಲೆದ ಮಣ್ಣಿಗೆ ಸಾವಯವ ಅಂಶವನ್ನು ಹೆಚ್ಚಿಸುವ ಪ್ರಯತ್ನಗಳಾಗದಿದ್ದರೆ ದೇಶವು ಗಂಭೀರವಾದ ಸುಸ್ಥಿರತೆಯ ಸಮಸ್ಯೆಯನ್ನು ಕಾಣುತ್ತದೆ ಎಂದು ತಿಳಿಸಿದೆ.

ಈ ಸಮಸ್ಯೆಗೆ ಪರಿಹಾರವಾಗಿ ಹಸುವಿನ ಸಗಣಿ ಗೊಬ್ಬರದ ಬಳಕೆಯನ್ನು ಉತ್ತೇಜಿಸಬೇಕು. ಇದರಿಂದಾಗಿ ದೀರ್ಘಕಾಲ ಮಣ್ಣಿನ ಫಲವತ್ತತೆಯ ಜೊತೆಗೆ ಗೋಶಾಲೆಗಳ ಆರ್ಥಿಕತೆಯ ಸುಧಾರಣೆ, ನೈಸರ್ಗಿಕ ಕೃಷಿಗೆ ಬೆಂಬಲ ಮತ್ತು ಕೃಷಿಯ ಸುಸ್ಥಿರತೆಯನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದ್ದರಿಂದ, ಹಸುವಿನ ಸಗಣಿ ಮತ್ತು ಗೋಮೂತ್ರವನ್ನು ಕೃಷಿಯಲ್ಲಿ ಸಸ್ಯ ಪೋಷಕಾಂಶಗಳ ಪೂರಕವಾಗಿ ಬಳಸಲು ಪ್ರೋತ್ಸಾಹಿಸಬೇಕು. ಅಲ್ಲದೆ, ಕೆಲವು ಅನುಪಾತದಲ್ಲಿ ಅಜೈವಿಕ ಮತ್ತು ಸಾವಯವ ಗೊಬ್ಬರವನ್ನು ಮಾರಾಟ ಮಾಡಲು ರಸಗೊಬ್ಬರ ಮಾರಾಟ ಮತ್ತು ಉತ್ಪಾದನಾ ಏಜೆನ್ಸಿಗಳನ್ನು ಕಡ್ಡಾಯಗೊಳಿಸಲು ನವೀನ ಕಾರ್ಯವಿಧಾನವನ್ನು ಜಾರಿಗೆ ತರಬೇಕಾಗಿದೆ ಎಂದು ವರದಿ ತಿಳಿಸಿದೆ.

Leave a Reply

Your email address will not be published.

This site uses Akismet to reduce spam. Learn how your comment data is processed.