ಈ ಬಾರಿಯ ದೀಪಾವಳಿಯನ್ನು ಚೀನಾ ವಸ್ತುಗಳ ಬಳಕೆಯನ್ನು ಬಿಟ್ಟು, ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ರಾಷ್ಟ್ರೋತ್ಥಾನ ಪರಿಷತ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Rashtrotthana Parishat


ರಾಷ್ಟ್ರೀಯ ಕಾಮಧೇನು ಆಯೋಗವು ದೇಶಾದ್ಯಂತ ಸೆಗಣೆಯಿಂದ (ಗೋಮಯ) ತಯಾರಿಸಿದ ಹಣತೆಯ ಮೂಲಕ ದೀಪಾವಳಿ ಆಚರಿಸುವ ‘ಕಾಮಧೇನು ದೀಪಾವಳಿ’ ಎಂಬ ಬೃಹತ್ ಆಂದೋಲನ ಹಮ್ಮಿಕೊಂಡಿದೆ. ಈ ಅಭಿಯಾನದೊಂದಿಗೆ ರಾಷ್ಟ್ರೋತ್ಥಾನ ಪರಿಷತ್ ಕೈ ಜೋಡಿಸಿದೆ.


ರಾಷ್ಟ್ರೋತ್ಥಾನ ಪರಿಷತ್ ದೇಸೀ ಗೋ ತಳಿಗಳ ರಕ್ಷಣೆಗಾಗಿ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯದ ಸಮೀಪ ಗೋಶಾಲೆಯನ್ನು ನಡೆಸುತ್ತಿದೆ. ಇಲ್ಲಿ 12 ಭಾರತೀಯ ತಳಿಗಳ 500ಕ್ಕೂ ಅಧಿಕ ಗೋವನ್ನು ಸಂರಕ್ಷಿಸಲಾಗಿದೆ. ಈ ಗೋವಿನ ಸೆಗಣಿಯನ್ನು ಬಳಸಿಕೊಂಡು 20,000ಕ್ಕೂ ಅಧಿಕ ದೀಪಗಳನ್ನು ತಯಾರಿಸಿ ಸಾರ್ವಜನಿಕರಿಗೆ ನೀಡಲಾಗುವುದು. ಈ ಮೂಲಕ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ ನಿರ್ಮಿಸಲು ನಾವೆಲ್ಲರೂ ಜೋಡಿಕೊಳ್ಳಬೇಕಾಗಿ ಸಾರ್ವಜನಿಕರಲ್ಲಿ ವಿನಂತಿಸುತ್ತಿದ್ದೇವೆ.

ಎಂದು ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಅಭಿಯಾನದ ಅಂಗವಾಗಿ ರಾಷ್ಟ್ರೀಯ ಕಾಮಧೇನು ಆಯೋಗವು ದೇಶಾದ್ಯಂತ 33 ಕೋಟಿ ದೀಪಗಳನ್ನು ತಯಾರಿಸುವ ಗುರಿ ಹೊಂದಿದೆ. ಶ್ರೀರಾಮಚಂದ್ರನ ಜನ್ಮಸ್ಥಾನವಾದ ಅಯೋಧ್ಯೆಯಲ್ಲಿ ಈ ಬಾರಿಯ ದೀಪಾವಳಿಯಂದು ಸಗಣಿಯಿಂದ ತಯಾರಿಸಿದ 3 ಲಕ್ಷ ದೀಪಗಳನ್ನು ಹಚ್ಚಲು ಹಾಗೂ ವಾರಾಣಾಸಿಯಲ್ಲಿ 1ಲಕ್ಷ ದೀಪಗಳನ್ನು ಹಚ್ಚಲು ಕಾಮಧೇನು ಆಯೋಗ ನಿರ್ಧರಿಸಿದೆ. ಇದೇ ರೀತಿ ನಮ್ಮ ಮನೆಗಳಲ್ಲಿಯೂ ಸ್ಥಳೀಯ ದೇವಾಲಯಗಳಲ್ಲಿಯೂ ಸೆಗಣಿಯಿಂದ ದೀಪಗಳನ್ನು ತಯಾರಿಸಿ ದೀಪಾವಳಿಯ ಬೆಳಕಿನ ಹಬ್ಬ ಆಚರಿಸೋಣ.
ರಾಜ್ಯದ ವಿವಿಧ ಗೋಶಾಲೆಗಳು, ಸ್ವಯಂಸೇವಾ ಸಂಸ್ಥೆಗಳು, ಸಾಮಾಜಿಕ ಸಂಘಟನೆಗಳು ಸಗಣಿಯಿಂದ ದೀಪ ತಯಾರಿಸಿ ಜನರಿಗೆ ನೀಡುವ ಈ ಪವಿತ್ರ ಕಾರ್ಯದಲ್ಲಿ ಕೈಜೋಡಿಸಬೇಕಾಗಿ ರಾಷ್ಟ್ರೋತ್ಥಾನ ಪರಿಷತ್ ಮನವಿ ಮಾಡಿದೆ.


ಕೊರೋನಾ ಹರಡುವುದನ್ನು ತಡೆಗಟ್ಟುವುರಲ್ಲಿಯೂ ಗೋ ಉತ್ಪನ್ನಗಳು ಪರಿಣಾಮಕಾರಿಯಾಗುತ್ತವೆ ಎನ್ನುವುದು ಈಗಾಗಲೇ ಸಿದ್ದವಾಗಿದೆ. ಈ ಬಾರಿಯ ದೀಪಾವಳಿಯನ್ನು ಸಗಣಿ ಹಾಗೂ ಪಂಚಗವ್ಯವನ್ನು ವ್ಯಾಪಕವಾಗಿ ಬಳಸುವ ಮೂಲಕ ಸ್ವಚ್ಛ ಮತ್ತು ಆರೋಗ್ಯಪೂರ್ಣ, ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ. ಹಾಗೂ ಈ ಬಾರಿಯ ದೀಪಾವಳಿಗೆ ಚೀನಾ ವಸ್ತುಗಳನ್ನು ಬಳಸದೇ ದೇಸೀ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ ನಿರ್ಮಿಸಲು ನಾವೆಲ್ಲ ಕೈಜೋಡಿಸಬೇಕಾಗಿ ರಾಷ್ಟ್ರೋತ್ಥಾನ ಪರಿಷತ್ ಈ ಮೂಲಕ ಮನವಿ ಮಾಡಿದೆ.

Leave a Reply

Your email address will not be published.

This site uses Akismet to reduce spam. Learn how your comment data is processed.