ಹುಬ್ಬಳ್ಳಿ :ಸಮುತ್ಕರ್ಷ ಐಎಎಸ್ ಕರ್ನಾಟಕ ವತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗಾಗಿ ಜನವರಿ ೧ ರಿಂದ ಹುಬ್ಬಳ್ಳಿಯಲ್ಲಿ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿಯನ್ನು ವಿದ್ಯಾನಗರದ ಕೆಎಲ್ಇ ಟೆಕ್ ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಆರಂಭಿಸುತ್ತಿದ್ದೇವೆ ಎಂದು ಸಮುತ್ಕರ್ಷ ಟ್ರಸ್ಟ್ ಕಾರ್ಯದರ್ಶಿ ಜಿತೇಂದ್ರ ನಾಯಕ ತಿಳಿಸಿದರು.


ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ ನಡೆಯಲಿದೆ. ದೆಹಲಿಯ ನುರಿತ ತರಬೇತಿದಾರರಿಂದ ಮತ್ತು ಹಿರಿಯ ಅಧಿಕಾರಗಳ ವಿಶೇಷ ತರಗತಿಗಳು ಹಾಗೂ ಸಂವಾದ ಕಾರ್ಯಕ್ರಮವನ್ನು ಆಯೋಜಿಸುತ್ತಾ ಅಧ್ಯಯನ ಕೇಂದ್ರವನ್ನು ಅತಿ ಕಡಿಮೆ ಖರ್ಚಿನಲ್ಲಿ ತರಬೇತಿ ನಡೆಯಲಿದೆ ಎಂದರು.

ದೆಹಲಿಯ ಸಂಕಲ್ಪದ ಸಹಯೋಗದೊಂದಿಗೆ ಕಳೆದ ಐದು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಸಮುತ್ಕರ್ಷ ಮಾರ್ಗದರ್ಶಿಯಾಗಿದೆ.
ಆಸಕ್ತ ಅಭ್ಯರ್ಥಿಗಳು ಇದೇ ಡಿ. 31 ರ ಒಳಗಾಗಿ ದೂ. 96634 24767 ಗೆ ಸಂಪರ್ಕಿಸಬಹುದು ಎಂದು ಜಿತೇ೦ದ್ರ ನಾಯ್ಕ್ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ನ ಸದಸ್ಯ ಅಚ್ಯುತ್ ಲಿಮಯೆ ಉಪಸ್ಥಿತರಿದ್ದರು.

Leave a Reply

Your email address will not be published.

This site uses Akismet to reduce spam. Learn how your comment data is processed.